ಸಿಟಿ ರವಿ​ಗೆ ಶಾಕ್: ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

Prasthutha|

- Advertisement -

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ.

- Advertisement -

ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ. ಇನ್ನು ವಿಪಕ್ಷ ನಾಯಕನ ಹುದ್ದೆ ರೇಸ್​ನಲ್ಲಿದ್ದ ಸಿಟಿ ರವಿ ಮತ್ತು ರವಿ ಕುಮಾರ್ ಅವರಿಗೆ ನಿರಾಸೆಯಾಗಿದೆ.



Join Whatsapp