Home ಟಾಪ್ ಸುದ್ದಿಗಳು ಚಾಮರಾಜನಗರ: ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಧ್ವಂಸ

ಚಾಮರಾಜನಗರ: ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಧ್ವಂಸ

ಚಾಮರಾಜನಗರ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗೆ ಹಾಕಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಚವಾಡಿ ಗ್ರಾಮದ ಹೊರವಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಮುಖದ ಮತ್ತು ಎದೆಯ ಭಾಗವನ್ನು ಕತ್ತರಿಸಿ ಕಿಡಿಗೇಡಿಗಳು ವಿಕೃತ ಮೆರೆದಿದ್ದಾರೆ. ಬೇಗೂರು ಠಾಣಾ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version