ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

Prasthutha|

ವಿಜಯವಾಡ: ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ.

- Advertisement -


ಟಿಡಿಪಿ-ಜೆಎಸ್ಪಿ-ಬಿಜೆಪಿ ಶಾಸಕರು ಎ-ಕನ್ವೆನ್ಷನ್ ಸೆಂಟರ್ ನಲ್ಲಿ ಸಭೆ ನಡೆಸಿ ಚಂದ್ರಬಾಬು ನಾಯ್ಡು ಅವರನ್ನು ಸಿಎಂ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ನಂತರ ಕನ್ವೆನ್ಷನ್ ಸೆಂಟರ್ನಲ್ಲಿ ಮಾತನಾಡಿದ ನಾಯ್ಡು, ಜನರು ನೀಡಿದ ತೀರ್ಪನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ. 3 ಪಕ್ಷಗಳ ಮುಖಂಡರು, ಕಾರ್ಯಕರ್ತರು ನೂರಕ್ಕೆ ನೂರು ಪ್ರತಿಶತ ಒಗ್ಗಟ್ಟಾಗಿ ಕೆಲಸ ಮಾಡಿದರು.

ಚುನಾವಣೆಯಲ್ಲಿ ಶೇ.93ರಷ್ಟು ಸ್ಥಾನಗಳನ್ನು ಗೆಲ್ಲುವುದು ದೇಶದ ಇತಿಹಾಸದಲ್ಲೇ ಅಪರೂಪ. ಚುನಾವಣೆಯಲ್ಲಿ ಜನರು 57 ರಷ್ಟು ಮತಗಳನ್ನು ಪಡೆದು ಆಶೀರ್ವದಿಸಿದ್ದಾರೆ. ನಾವೆಲ್ಲರೂ ಹೆಚ್ಚು ಜವಾಬ್ದಾರಿಯುತರಾಗಬೇಕು ಎಂದು ಹೇಳಿದ್ದಾರೆ.

Join Whatsapp
Exit mobile version