ವಿಶಾಖಪಟ್ಟಣಂ ಅನಿಲ ಸೋರಿಕೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಚಂದ್ರಬಾಬು ನಾಯ್ಡು ಆಗ್ರಹ

Prasthutha|

ಅಮರಾವತಿ: ವಿಶಾಖಪಟ್ಟಣಂನ ಪ್ರಯೋಗಾಲಯದಲ್ಲಿ ಸುಮಾರು 200 ಕಾರ್ಮಿಕರು ಅಸ್ವಸ್ಥಗೊಂಡ ಇತ್ತೀಚಿನ ಅನಿಲ ಸೋರಿಕೆ ಘಟನೆಯ ಬಗ್ಗೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಪೀಡಿತ ಕಾರ್ಮಿಕರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕು ಎಂದು ನಾಯ್ಡು ಒತ್ತಾಯಿಸಿದರು.

ಅಚ್ಯುತಪುರಂ ಎಸ್ ಇಝಡ್ ನಲ್ಲಿ ಅನಿಲ ಸೋರಿಕೆಗೆ ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

- Advertisement -

 ಆಂಧ್ರಪ್ರದೇಶದ ವಿಶಾಖಪಟ್ಟಣದ ಅಟ್ಟುತಪುರಂನಲ್ಲಿರುವ ಪ್ರಯೋಗಾಲಯದಲ್ಲಿ ಅನಿಲ ಸೋರಿಕೆಯಾದ ನಂತರ ಶುಕ್ರವಾರ 178 ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ ಎಂದು ಆಂಧ್ರಪ್ರದೇಶದ ಕೈಗಾರಿಕಾ ಸಚಿವ ಗುಡಿವಾಡ ಅಮರನಾಥ್ ಮಾಹಿತಿ ನೀಡಿದ್ದಾರೆ.

Join Whatsapp