ರಾಜ್ಯಾಧ್ಯಕ್ಷನಾದ 20 ದಿನಗಳಲ್ಲಿಯೇ ಬದಲಾವಣೆ ಆಗುತ್ತಿದೆ: ವಿಜಯೇಂದ್ರ

Prasthutha|

ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ ಕಳೆದ ಇಪ್ಪತ್ತು ದಿನಗಳಲ್ಲಿಯೇ ಬದಲಾವಣೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

- Advertisement -

ಬೆಳಗಾವಿಯಲ್ಲಿ ಮಾತನಾಡಿದ ಅವರು, ಪ್ರಶಿಕ್ಷಣ ವರ್ಗ ಯಶಸ್ವಿಯಾಗಿ ನಡೆಯುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಮತ್ತೊಂದೆಡೆ ನಾವು ನಿರೀಕ್ಷೆ ಮಾಡದ ರೀತಿಯಲ್ಲಿ ಕರ್ನಾಟಕದಲ್ಲಿ ನಮಗೆ ಹಿನ್ನಡೆ ಆಗಿದೆ. ಪಕ್ಷದ ಕಾರ್ಯಕರ್ತರಲ್ಲೂ ನಿರುತ್ಸಾಹ, ಆಕ್ರೋಶ ಇತ್ತು. ಮುಂದಿನ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಬೇಕಿದೆ. ಜಿ.ಪಂ, ತಾ.ಪಂ ಚುನಾವಣೆ ಬರುತ್ತದೆ. ಅದನ್ನು ಯಶಸ್ವಿಯಾಗಿ ಮಾಡಬೇಕು ಎಂದರು.

Join Whatsapp