ಸಿಎಂ ಬದಲಾವಣೆ | ಸ್ವಾಮೀಜಿ ಹೇಳಿಕೆ ಹಿಂದೆ ಬಿಜೆಪಿ ಕೈವಾಡ ಎಂದ ಸಚಿವ ಚಲುವರಾಯಸ್ವಾಮಿ

Prasthutha|

ಬೆಂಗಳೂರು: ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಹಾಗೂ ಲಿಂಗಾಯತರು ಸಿಎಂ ಆಗಬೇಕು ಎಂಬ ಶಿವಾಚಾರ್ಯ ಶ್ರೀಗಳ ಹೇಳಿಕೆಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಸ್ವಾಮೀಜಿಗಳ ಹೇಳಿಕೆಯ ಹಿಂದೆ ಬಿಜೆಪಿ ಕೈವಾಡ ಇರಬಹುದು ಎಂದು ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದರಲ್ಲಿ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಾನಗಳು ಹೆಚ್ಚಾಗಿವೆ. ಹಾಗಾಗಿ ಸದ್ಯದ ಪರಿಸ್ಥಿತಿಯ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು ಎಂದು ಹೇಳಿದರು.


ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆಯೂ ಹೊಂದಾಣಿಕೆಯೂ ಚೆನ್ನಾಗಿದೆ. ಹೈಕಮಾಂಡ್ ಸಹ ಅವರಿಬ್ಬರನ್ನು ಕೂರಿಸಿಕೊಂಡು ಚರ್ಚೆ ಮಾಡುತ್ತದೆ ಎಂದರು.

Join Whatsapp
Exit mobile version