Home ಟಾಪ್ ಸುದ್ದಿಗಳು ಚನ್ನಪಟ್ಟಣ ಉಪಚುನಾವಣೆ | ಟಿಕೆಟ್ ಗಾಗಿ ಬಕಪಕ್ಷಿಯಂತೆ ಕಾಯ್ತಿದ್ದೇನೆ: ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆ | ಟಿಕೆಟ್ ಗಾಗಿ ಬಕಪಕ್ಷಿಯಂತೆ ಕಾಯ್ತಿದ್ದೇನೆ: ಯೋಗೇಶ್ವರ್

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ. ಟಿಕೆಟ್ ಗಾಗಿ ನಾನು ಭಕಪಕ್ಷಿಯಂತೆ ಕಾಯುತ್ತಿದ್ದು, ಹೆಸರು ಘೋಷಣೆ ಮಾಡಿದ ಕೂಡಲೇ ನಾಮಪತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಭಿಮಾನಿಗಳು ಸ್ವಾಭಿಮಾನಿ ಸೈನಿಕನ ಸ್ಪರ್ಧೆ ಖಚಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಳೆಯಬೇಕೆಂದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕಿದೆ. ಈ ಭಾಗದಲ್ಲಿ ಬಿಜೆಪಿಗೆ ನಾನೇ ಸೀನಿಯರ್. ಕುಮಾರಸ್ವಾಮಿ ಕೂಡಾ ಪ್ರಜ್ಞಾವಂತರಿದ್ದಾರೆ. ಕಾದುನೋಡಿ ಎಲ್ಲರನ್ನೂ ಸಮಾಧಾನ ಮಾಡಿ ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.


‘ನನಗಿರುವ ಮಾಹಿತಿ ಪ್ರಕಾರ ಬಿಜೆಪಿ-ಜೆಡಿಎಸ್ ಮುಖಂಡರು ನನ್ನ ಹೆಸರನ್ನು ಅಂತಿಮಗೊಳಿಸುತ್ತಾರೆ. ನನಗೆ ಪಕ್ಷದ ವರಿಷ್ಠರ ಮೇಲೆ ಸಂಪೂರ್ಣ ವಿಶ್ವಾಸ ಇದೆ. ಹಾಗಾಗಿ ನಾನು ಚುನಾವಣಾ ಕಣದಲ್ಲಿರುತ್ತೇನೆ’ ಎಂದು ಹೇಳಿದ್ದಾರೆ.

Join Whatsapp
Exit mobile version