‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿಯಲ್ಲ: ದತ್ತಾತ್ರೇಯ ಹೊಸಬಾಳೆ

Prasthutha|

ಸುಲ್ತಾನ್‌ಪುರ: ‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿಯಲ್ಲ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

- Advertisement -

ಉತ್ತರಪ್ರದೇಶದ ಸುಲ್ತಾನ್ ಪುರದಲ್ಲಿ ‘ಮಕರ ಸಂಕ್ರಾಂತಿ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತ ಮಾತಾಕಿ ಜೈ’ ಎಂದು ಕೂಗುವುದು ದೇಶಭಕ್ತಿ ಅಲ್ಲ. ದೇಶಭಕ್ತರಾಗುವುದಕ್ಕೆ ನಿಸ್ವಾರ್ಥ ಸೇವೆಯ ಅಗತ್ಯ ಇದೆ’ ಎಂದು ಅಭಿಪ್ರಾಯಪಟ್ಟರು.

ಶ್ರೀರಾಮನ ಹೆಸರಿನಿಂದ ಜನರ ಉನ್ನತಿಯಾಗಿಲ್ಲ. ಆದರೆ, ರಾಮನ ಕೆಲಸಗಳು ಜನರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದೆ. ಶ್ರೀಕೃಷ್ಣನ ಹಿರಿಮೆ, ಶ್ರೀರಾಮನ ಗರಿಮೆಗಳನ್ನು ಜನರು ತಮ್ಮ ವರ್ತನೆಯಲ್ಲಿ ರೂಢಿಸಿಕೊಂಡರೆ ಮಾತ್ರವೇ ಕೃಷ್ಣ, ರಾಮರು ಜನರ ಮಧ್ಯೆ ಇರುತ್ತಾರೆ. ‘ಭಾರತ ಮಾತಾಕಿ ಜೈ’ ಎಂದು ಕೂಗಿದರೆ ದೇಶಭಕ್ತಿ ಇದೆ ಎಂದು ಅರ್ಥವಲ್ಲ. ಜೀವನದಲ್ಲಿ ಕಠಿಣ ಪರಿಶ್ರಮ ಪಡುವ ವ್ಯಕ್ತಿಗೆ ಮಾತ್ರವೇ ಭಾರತ್‌ ಮಾತಾಕಿ ಜೈ ಎಂದು ಹೇಳುವ ನೈತಿಕ ಹಕ್ಕಿದೆ’ ಎಂದು ಹೊಸಬಾಳೆ ಹೇಳಿದ್ದಾರೆ.

Join Whatsapp