Home ಟಾಪ್ ಸುದ್ದಿಗಳು ಸಿಎಂ ಅಭ್ಯರ್ಥಿ ಘೋಷಿಸಲು ವೇದಿಕೆಯಲ್ಲೇ ರಾಹುಲ್‌ಗೆ ಮನವಿ ಮಾಡಿದ ಪಂಜಾಬ್ ಮುಖ್ಯಮಂತ್ರಿ

ಸಿಎಂ ಅಭ್ಯರ್ಥಿ ಘೋಷಿಸಲು ವೇದಿಕೆಯಲ್ಲೇ ರಾಹುಲ್‌ಗೆ ಮನವಿ ಮಾಡಿದ ಪಂಜಾಬ್ ಮುಖ್ಯಮಂತ್ರಿ

ಚಂಡೀಗಢ: ಪಂಜಾಬ್‌ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ವೇದಿಕೆಯಲ್ಲೇ ಮನವಿ ಮಾಡಿದರು.

ಚುನಾವಣಾ ಪ್ರಚಾರದ ಸಭೆಯೊಂದರಲ್ಲಿ ಭಾಷಣ ಮಾಡುತ್ತಿದ್ದ ಚನ್ನಿ, ‘ ನಮ್ಮ ನಡುವೆ ಯಾವುದೇ ಜಗಳವಿಲ್ಲ. ಪಂಜಾಬ್ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ. ನಾವೆಲ್ಲ ಒಗ್ಗಟ್ಟಾಗಿ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

ನವಜೋತ್‌ ಸಿಂಗ್‌ ಸಿಧು ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಆಹ್ವಾನಿಸಿದ ಚನ್ನಿ ಅವರನ್ನೆಲ್ಲ ತಬ್ಬಿ ಒಗ್ಗಟ್ಟು ಪ್ರದರ್ಶಿಸಿ ರಾಹುಲ್ ಗೆ ಮನವಿ ಮಾಡಿಕೊಂಡಿದ್ದಾರೆ.

ನಂತರ ಮಾತನಾಡಿದ ರಾಹುಲ್‌ ಗಾಂಧಿ, ‘ಪಂಜಾಬ್‌ನ ಕಾಂಗ್ರೆಸ್‌ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗುವುದು’ ಎಂದು ಹೇಳಿದರು.

Join Whatsapp
Exit mobile version