ಚಾರ್ಮಾಡಿ ಘಾಟ್: ಬೆಳ್ಳಂಬೆಳಗ್ಗೆ ಮಳೆಯ ಮಧ್ಯೆ ಹೊತ್ತಿ ಉರಿದ ಕಾರು

Prasthutha|

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಕಲ್ ದೇವಸ್ಥಾನದ ಬಳಿ ಚಾರ್ಮಾಡಿ ಘಾಟ್ ನಲ್ಲಿ ಮಳೆ ಮಧ್ಯೆಯೂ ಕಾರೊಂದು ಹೊತ್ತಿ ಉರಿದಿದೆ‌.

- Advertisement -

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕುಟುಂಬವೊಂದು ಚಾರ್ಮಾಡಿ ಘಾಟ್ ನಲ್ಲಿ ಸಾಗುತ್ತಿದ್ದ ವೇಳೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಇಳಿದು ಹೊರಗೆ ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗಿನ ಜಾವ ಎರಡು ಗಂಟೆ ವೇಳೆಗೆ ಈ ಬೆಂಕಿ ಅನಾಹುತ ನಡೆದಿದ್ದು, ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp