ಛತ್ತೀಸ್ ಗಢ ಎನ್ ಕೌಂಟರ್: 35 ನಕ್ಸಲರ ಹತ್ಯೆ

Prasthutha|

ರಾಯ್ಪುರ: ಛತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶಗಳಾದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದು, 35 ನಕ್ಸಲರು ಸಾವನ್ನಪ್ಪಿದ್ದಾರೆ.

- Advertisement -


ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.


ದಾಂತೇವಾಡದ ಬರ್ಸೂರಿನ ತುಳತುಳಿ ಗ್ರಾಮ ಮತ್ತು ನಾರಾಯಣಪುರದ ಓರ್ಚಾದ ನೆಂದೂರು ಗ್ರಾಮದ ಅರಣ್ಯದಲ್ಲಿ ನಕ್ಸಲರು ಇರುವ ಖಚಿತ ಮಾಹಿತಿ ಮೇರೆಗೆ ಭದ್ರತಾಪಡೆಗಳು ಶೋಧ ಕಾರ್ಯ ಆರಂಭಿಸಿದವು ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದೆ.

- Advertisement -


ನಾರಾಯಣಪುರ-ದಾಂತೇವಾಡ ಗಡಿ ಪ್ರದೇಶದಲ್ಲಿ ಬಸ್ತಾರ್ ಪ್ರದೇಶದ ಉನ್ನತ ನಕ್ಸಲೀಯರ ಸಭೆಯ ಬಗ್ಗೆ ಮಾಹಿತಿ ಲಭಿಸಿತು. ಈ ಹಿನ್ನೆಲೆ ಹುಡುಕಾಟ ಮತ್ತು ರಕ್ಷಣಾ ತಂಡಗಳನ್ನು ಕಳುಹಿಸಲಾಯಿತು. ಶುಕ್ರವಾರ ಮಧ್ಯಾಹ್ನದಿಂದ ಎನ್ ಕೌಂಟರ್ ಆರಂಭವಾಗಿ ತಡರಾತ್ರಿಯವರೆಗೂ ಮುಂದುವರೆಯಿತು. ಶನಿವಾರ ಬೆಳಗ್ಗೆಯೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇಲ್ಲಿಯವರೆಗೆ ಒಟ್ಟು 35 ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ನಾರಾಯಣಪುರ ಎಸ್ಪಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.



Join Whatsapp