ಛತ್ತೀಸ್ ಗಢ | ಹಾಡಹಗಲೇ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ

Prasthutha|

ರಾಯ್ಪುರ: ಹಾಡಹಗಲೇ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜು ತ್ರಿಪಾಠಿ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಛತ್ತೀಸ್’ಗಡದ ಬಿಲಾಸ್’ಪುರ ಜಿಲ್ಲೆಯ ಸಕ್ರಿ ಮೇಲ್ಸೇತುವೆ ಬಳಿ ನಡೆದಿದೆ.

- Advertisement -

ಬುಧವಾರ ಸಂಜೆ ತ್ರಿಪಾಠಿ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಿಪಾಠಿ ತನ್ನ ಕಾರಿನಲ್ಲಿ ಬೈಪಾಸ್ ಬಳಿ ಹೋಗುತ್ತಿದ್ದಾಗ ಇಬ್ಬರು-ಮೂವರು ಬಂದು ಗುಂಡು ಹಾರಿಸಿದರು. ಅವರ ತಲೆಗೆ ಗುಂಡೇಟು ತಗುಲಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಿಲಾಸ್ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪಾರುಲ್ ಮಾಥುರ್ ಹೇಳಿದ್ದಾರೆ.

- Advertisement -

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Join Whatsapp