ಛತ್ತೀಸಗಢ: ಏಳು ನಕ್ಸಲರ ಹತ್ಯೆ

Prasthutha|

ರಾಯಪುರ: ಛತ್ತೀಸಗಢ ರಾಜ್ಯದ ನಾರಾಯಣಪುರ ಮತ್ತು ಕಾಂಕೇರ್ ಜಿಲ್ಲೆಗಳ ಗಡಿ ಪ್ರದೇಶದ ಕಾಡಿನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು ಏಳು ಜನ ನಕ್ಸಲರು ಹತ್ಯೆಯಾಗಿದ್ದಾರೆ.

- Advertisement -

ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ವಿಶೇಷ ಕಾರ್ಯಪಡೆ ಪೊಲೀಸರು ಹಾಗೂ ಜಿಲ್ಲಾ ಮೀಸಲು ಪಡೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.


ಮಂಗಳವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ 7 ಜನ ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Join Whatsapp