Home ಕರಾವಳಿ ಮೂಡುಬಿದಿರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

ಮೂಡುಬಿದಿರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

ಮೂಡುಬಿದಿರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಮೂಡಬಿದ್ರೆ ಮಹಾವೀರ ಕಾಲೇಜು ಗ್ರೌಂಡ್ ಗೆ ಆಗಮಿಸಿದರು.

ಹೆಲಿಪ್ಯಾಡ್ ನಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಸ್ವಾಗತಿಸಿದರು. ಶಾಸಕ ಉಮಾನಾಥ್ ಕೋಟ್ಯಾನ್ ಹಾಗೂ ಬಿಜೆಪಿ ನಾಯಕರು ಹೆಲಿಪ್ಯಾಡ್ ನಿಂದ ನೇರವಾಗಿ ಎಕ್ಸಲೆಂಟ್ ಕಾಲೇಜಿಗೆ ತೆರಳಿ ಅನ್ನದಾಸೋಹ ಕಟ್ಟಡ ಉದ್ಘಾಟನೆ ಮಾಡಿದರು.

ಸಿಎಂ ಬೊಮ್ಮಾಯಿ ಅವರು ಇಂದು ಮಂಗಳೂರಿನಲ್ಲಿ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿತ್ತು.

Join Whatsapp
Exit mobile version