ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ

Prasthutha|

ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ನಡೆಯುವ ಏಪ್ರಿಲ್ 30ರಂದು, ಹೈಕೋರ್ಟ್ ಮುಖ್ಯ ನಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಬೊಮ್ಮಾಯಿ ಬಳಿಕ ನಾಳೆ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಆಯೋಜಿಸಿರುವ ಭೋಜನ ಕೂಟದಲ್ಲೂ ಭಾಗಿಯಾಗಲಿದ್ದಾರೆ.

- Advertisement -

ಸಿಎಂ ದೆಹಲಿ ಪ್ರವಾಸದಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚೆನೆಯ ಬಗ್ಗೆ ಚರ್ಚೆಯಾಗುವ ಸಂಭವವಿದ್ದು, ಹೈಕಮಾಂಡ್ ನಾಯಕರ ಜೊತೆ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾನುವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಸಿಎಂ ವಾಪಸ್‌ ಆಗಲಿದ್ದಾರೆ.

Join Whatsapp