ಮುಖ್ಯಮಂತ್ರಿ ಬೊಮ್ಮಾಯಿ ಒಬ್ಬ ಕೋಮುವಾದಿ: ನಟ ಚೇತನ್

Prasthutha|

ದಾವಣಗೆರೆ:  ಬಸವರಾಜ ಬೊಮ್ಮಾಯಿ ಒಬ್ಬ ಕೋಮುವಾದಿ ಮುಖ್ಯಮಂತ್ರಿ ಎಂದು ನಟ ಚೇತನ್ ಅಹಿಂಸಾ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಈ ಬಗ್ಗೆ ನಗರದಲ್ಲಿ ಮಾತನಾಡಿದ  ಅವರು, ಬೊಮ್ಮಾಯಿಯವರು ಜಾತ್ಯಾತೀತ ಮುಖ್ಯಮಂತ್ರಿ ಅಂದುಕೊಂಡಿದ್ವಿ. ಆದರೆ ಅವರೊಬ್ಬ ಕೋಮುವಾದಿ ಮುಖ್ಯಮಂತ್ರಿ. ಜನರನ್ನು ಹೆದರಿಸಲು ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ಅಂಬೇಡ್ಕರ್, ಬಸವಣ್ಣನವರು ಕೂಡ ಅವರಿಗೆ ಬೇಕಾದ ಧರ್ಮ ಸ್ಥಾಪನೆ ಮಾಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂವಿಧಾನದ ವಿರೋಧಿ ನೀತಿಯಾಗಿದೆ. ಜನರು ಅವರಿಗೆ ಬೇಕಾದ ಧರ್ಮಕ್ಕೆ ಸೇರಬಹುದು ಎನ್ನುವುದು ಸಂವಿಧಾನದಲ್ಲಿದೆ ಎಂದರು.

ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಕ್ರಮ ಕೈಗೊಳ್ಳಲಿ. ಆದರೆ ಜನರಿಗೆ ಹೆದರಿಸಿ ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ, ಕ್ರಿಶ್ಚಿಯನ್ನರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡಿ ಕಾಯ್ದೆ ತಂದಿದ್ದಾರೆ ಎಂದು ಆರೋಪಿಸಿದರು.

Join Whatsapp