ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ

Prasthutha|

ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ,  ಮಾಜಿ ಶಾಸಕರು  ಹಾಗೂ ಹಿರಿಯ  ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

- Advertisement -

ಪಕ್ಷದ ಸಂಘಟನೆಯ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ  ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ  ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ  ಬಿ.ಟಿ. ನಾಗಣ್ಣ  ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್  ರವರುಗಳನ್ನು ನೇಮಿಸಲಾಗಿದೆ.

ಪಕ್ಷದ ಈ ಹಿಂದಿನ   ರಾಜ್ಯಾಧ್ಯಕ್ಷರಾಗಿದ್ದ  ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ  ಜಂಟಿ ಕಾರ್ಯದರ್ಶಿಗಳನ್ನಾಗಿ  ನೇಮಿಸಲಾಗಿದೆ.



Join Whatsapp