ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಸಲು ಮುಖ್ಯಮಂತ್ರಿ ಸೂಚನೆ

Prasthutha|

‘ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -


ಬೈಕ್ ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (38) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ.
ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಸಂಚಾರಿ ವಿಜಯ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 8ರಿಂದ 10ರವರೆಗೆ ವ್ಯವಸ್ಥೆ ಮಾಡಲಾಗಿತ್ತು.

Join Whatsapp