ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ | ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ಪೊಲೀಸ್ ವಶಕ್ಕೆ

Prasthutha|

ಚಿಕ್ಕಬಳ್ಳಾಪುರ : ಇಲ್ಲಿನ ಹಿರೇನಾಗವೇಲಿಯಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದ ನಂತರ ತಲೆ ಮರೆಸಿಕೊಂಡಿದ್ದ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇನ್ನೋರ್ವ ಮಾಲೀಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿದೆ.

- Advertisement -

ಸ್ಫೋಟದ ಬಳಿಕ ಇವರು ತಲೆ ಮರೆಸಿಕೊಂಡಿದ್ದರು. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ಘಟನೆಗೆ ಸಂಬಂಧಿಸಿ ಸ್ಫೋಟಕಗಳನ್ನು ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ.

ಘಟನೆಗೆ ಪೊಲೀಸ್ ವೈಫಲ್ಯವೂ ಕಾರಣವಾದುದರಿಂದ, ಕರ್ತವ್ಯ ಲೋಪದ ಆರೋಪದಡಿ ಗುಡಿಬಂಡೆ ಇನ್ಸ್ ಪೆಕ್ಟರ್ ಮಂಜುನಾಥ್, ಎಸ್ ಐ ಗೋಪಾಲ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ಹಿರೇನಾಗವೇಲಿ ಒಂದೇ ಗ್ರಾಮದಲ್ಲಿ 250-300 ಎಕರೆ ಜಾಗದಲ್ಲಿ ಸುಮಾರು 53 ಕ್ವಾರಿಗಳಿವೆ. ಇಲ್ಲಿನ ಬೆಟ್ಟವನ್ನೇ ಪುಡಿಪುಡಿ ಮಾಡಿ ಕ್ವಾರಿ ಮಾಡಲಾಗುತ್ತಿದೆ ಎನ್ನಲಾಗಿದೆ.

Join Whatsapp