Home Uncategorized ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ | 6 ಸಾವು; ಮೂವರು ಗಂಭೀರ

ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ | 6 ಸಾವು; ಮೂವರು ಗಂಭೀರ

ಚಿಕ್ಕಬಳ್ಳಾಪುರ : ಇಲ್ಲಿನ ಹೀರೆನಾಗವೇಲಿ ಸಮೀಪದ ಕಲ್ಲು ಕ್ವಾರಿ ಬಳಿ ನಡೆದ ಜಿಲೆಟಿನ್ ಸ್ಫೋಟಗೊಂಡು ಆರು ಜನ ಸಾವಿಗೀಡಾದ ಘಟನೆ ನಡೆದಿದೆ. ಆದರೆ, ಘಟನೆಯಲ್ಲಿ ಚಾಲಕ ಪವಾಡ ಸದೃಶವಾಗಿ ಬದುಕುಳಿದಿದ್ದಾನೆ.

ಘಟನೆಯಲ್ಲಿ ಎಂಜಿನಿಯರ್, ಕಂಪ್ಯೂಟರ್ ಆಪರೇಟರ್, ವಾಚ್ ಮ್ಯಾನ್, ಅಕೌಂಟೆಂಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮೃತದೇಹಗಳು ಛಿದ್ರ ಛಿದ್ರವಾಗಿವೆ. ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ರೆಡ್ಡಿ, ಆಂಧ್ರ ಪ್ರದೇಶದ ರಾಘವೇಂದ್ರ ರೆಡ್ಡಿ, ಶಿವಾರೆಡ್ಡಿ ಮಾಲೀಕತ್ವದ ಕ್ರಷರ್ ಇದು ಎನ್ನಲಾಗಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಪ್ರತಿಕ್ರಿಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು.

ಶಿವಮೊಗ್ಗದ ಹುಣಸೋಡಿನಲ್ಲಿ ದೊಡ್ಡ ಪ್ರಮಾಣದ ಸ್ಫೋಟವೊಂದು ನಡೆದು ದೇಶವೇ ಬೆಚ್ಚಿಬಿದ್ದಿತ್ತು. ಈ ನೆನಪು ಮಾಸುವ ಮುನ್ನವೇ ಮತ್ತೊಂದು ಅಂತಹುದೇ ಸ್ಫೋಟ ನಡೆದಿರುವುದು ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ.

Join Whatsapp
Exit mobile version