ಚಿಕ್ಕಮಂಗಳೂರು: ದಲಿತ ಕಾರ್ಮಿಕನ ಮೇಲೆ ಹಲ್ಲೆ, ಎಸ್ಟೇಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲು

Prasthutha|

ಚಿಕ್ಕಮಂಗಳೂರು: ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ಎಂಬಾತನ ವಿರುದ್ಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಸಂತ್ರಸ್ತ ಕಾರ್ಮಿಕ ಯಲ್ಲಪ್ಪ ಕಳೆದ 15 ವರ್ಷಗಳಿಂದ ಕಾಂತರಾಜು ಅವರೊಂದಿಗೆ ಕೆಲಸ ಮಾಡುತ್ತಿದ್ದರು. ತೋಟದ ಕೆಲಸಕ್ಕೆ ಬರಲಿಲ್ಲ ಎಂಬ ವಿಚಾರಕ್ಕೆ ಕುಪಿತಗೊಂಡು ಕಾಂತರಾಜು ಅವರು ಯಲ್ಲಪ್ಪ ಅವರಿಗೆ ಥಳಿಸಿದ್ದಾಗಿ ತಿಳಿದುಬಂದಿದೆ.

ಯಲ್ಲಪ್ಪನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ.

- Advertisement -

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Join Whatsapp