Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್; ಮೂವರು ಮೃತ್ಯು, ಹಲವರಿಗೆ ಗಾಯ

ಚಿಕ್ಕಮಗಳೂರು : ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್; ಮೂವರು ಮೃತ್ಯು, ಹಲವರಿಗೆ ಗಾಯ

ಮೂಡಿಗೆರೆ: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ಘಟನೆ ಸಂಭವಿಸಿದೆ.

ರಾಜು (47) ರಚನಾ (35) ಪಾರ್ವತಿ (26) ಮೃತ ದುರ್ದೈವಿಗಳು.

ಇತರ ಆರು ಮಂದಿ  ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಗಂಭೀರ ಗಾಯಗೊಂಡ  ಸಂಗೀತ, ಪಲ್ಲವಿ ಎಂಬ ಇಬ್ಬರನ್ನು ಹಾಸನಕ್ಕೆ ಕರೆದೊಯ್ಯಲಾಗಿದೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾನೆ.

ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version