Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಐಟಿ ಕಂಪನಿ ಉದ್ಯೋಗಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ಐಟಿ ಕಂಪನಿ ಉದ್ಯೋಗಿ ಅನುಮಾನಾಸ್ಪದ ಸಾವು

ಮೂಡಿಗೆರೆ: ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬೈರನಾಯಕನಹಳ್ಳಿಯಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸಮೀಪದ ಸಂಸೆ ಮೂಲದ ಐಟಿ ಉದ್ಯೋಗಿ ಟಿ.ಸಾಗರ್‌ ಎಂದು ಗುರುತಿಸಲಾಗಿದೆ.


ಬೈರನಾಯಕಹಳ್ಳಿ ರೈಲು ರೈಲುಹಳಿಯಲ್ಲಿ ಸಾಗರ್‌ ಅವರ ಮೃತದೇಹ ಪತ್ತೆಯಾಗಿದ್ದು, ಸಮೀಪದಲ್ಲೇ ಅವರ ದ್ವಿಚಕ್ರ ವಾಹನವೂ ಕಂಡು ಬಂದಿದೆ. ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೃತ ಸಾಗರ್‌ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ತನಿಖೆಯ ಬಳಿಕ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

Join Whatsapp
Exit mobile version