ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಾರಿನಲ್ಲಿ ದಾಖಲೆ ಇಲ್ಲದ ಲಕ್ಷಾಂತರ ನಗದು ಪತ್ತೆ

Prasthutha|

ಚಿಕ್ಕಮಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆ ಚುನಾವಣಾ ಅಕ್ರಮ ತಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್​ಪೋಸ್ಟ್​ಗಳನ್ನ ನಿರ್ಮಿಸಿದೆ.

- Advertisement -

ಅದರಂತೆ ಇದೀಗ ಕಡೂರು ಜೆ.ಡಿ.ಎಸ್ ಅಭ್ಯರ್ಥಿ ಧನಂಜಯ ಅವರಿಗೆ ಸೇರಿದ ಕಾರಿನಲ್ಲಿದ್ದ 9ಲಕ್ಷ ರೂಪಾಯಿ ಹಣವನ್ನ ತಾಲೂಕಿನ ಬಸವನಹಳ್ಳಿ ದಿಬ್ಬದ ಚೆಕ್ ಪೋಸ್ಟ್​ನಲ್ಲಿ ವಶಕ್ಕೆ ಪಡೆಯಲಾಗಿದೆ.

ಚುನಾವಣೆಗೆ ಬಳಸಲು ಕೊಂಡೊಯ್ಯುತ್ತಿದ್ದ ದಾಖಲೆ ಇಲ್ಲದ 9 ಲಕ್ಷ ಅಕ್ರಮ ಹಣವನ್ನ ವಶಕ್ಕೆ ಪಡೆಯಲಾಗಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕಳೆದ 24 ಗಂಟೆಗಳಲ್ಲಿ ಚುನಾವಣಾ ಆಯೋಗ ರಾಜ್ಯಾದ್ಯಂತ 17.36 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಆಯೋಗ 126.14 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ಜಪ್ತಿ ಮಾಡಿದೆ.

Join Whatsapp