ಚಿಕ್ಕಮಗಳೂರು: ಇಬ್ಬರನ್ನು ಬಲಿ ಪಡೆದ KSRTC ಬಸ್

Prasthutha|

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಎಪಿಎಂಸಿ ಬಳಿ ನಡೆದಿದೆ.
ಮೃತರನ್ನು 24 ವರ್ಷದ ಶ್ರೀಧರ್ ಹಾಗೂ 30 ವರ್ಷದ ದಯಾನಂದ್ ಎಂದು ಗುರುತಿಸಲಾಗಿದೆ. ಮೃತ ಶ್ರೀಧರ್ ತಾಲೂಕಿನ ಜಾವಗಲ್ ಮೂಲದವರು. ದಯಾನಂದ್ ನಗರದ ದಂಟರಮಕ್ಕಿ ಬಡಾವಣೆ ನಿವಾಸಿ. ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

- Advertisement -


ಚಿಕ್ಕಗಳೂರು ಕಡೆಯಿಂದ ಕಡೂರು ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಎ.ಐ.ಟಿ. ಸರ್ಕಲ್ ಕಡೆಯಿಂದ ನಗರಕ್ಕೆ ಆಗಮಿಸುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವಾಗುತ್ತಿದ್ದಂತೆ ಸ್ಥಳಿಯರು ಇಬ್ಬರನ್ನೂ ಆಸ್ಪತ್ರೆ ದಾಖಲಿಸಲು ಮುಂದಾಗಿದ್ದಾರೆ. ಆದರೆ, ಅಪಘಾತದ ತೀವ್ರತೆಯಿಂದಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಾಘತ ಸಂಭವಿಸುತ್ತಿದ್ದಂತೆ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಬಸ್ಸನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಸ್ಥಳಿಯರು ಸರ್ಕಾರಿ ಬಸ್ ಚಾಲಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp