Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಶ್ರೀಗಂಧ ಮರ ಕಳ್ಳಸಾಗಣೆ; ಆರೋಪಿಗಳ ಬಂಧನ

ಚಿಕ್ಕಮಗಳೂರು: ಶ್ರೀಗಂಧ ಮರ ಕಳ್ಳಸಾಗಣೆ; ಆರೋಪಿಗಳ ಬಂಧನ

ಮೂಡಿಗೆರೆ: ಶ್ರೀಗಂಧ ಮರವನ್ನು ಕಡಿದು ಸಾಗಾಟಕ್ಕೆ ಯತ್ನಿಸುತ್ತಿದ್ದ ಮಾಹಿತಿ ತಿಳಿದ  ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರದ ದಿಮ್ಮಿಗಳ ಸಮೇತ ಐದು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಗೋಣೀಬೀಡು ಹೋಬಳಿಯ ಹೆಗ್ಗರವಳ್ಳಿಯಲ್ಲಿ ನಡೆದಿದೆ.

ಆರೋಪಿಗಳನ್ನುಬಿಳಗುಳ ಗ್ರಾಮದ ಕೃಷ್ಣ, ಕಾರ್ತಿಕ್, ಹರೀಶ್, ಸ್ವಾಮಿ, ಅಗ್ನಿ ಎಂದು ಗುರುತಿಸಲಾಗಿದೆ. ಮರಗಳನ್ನು ಕಡಿದು ಸಾಗಿಸುತ್ತಿದ್ದ ವಿಷಯವನ್ನು ತಿಳಿದ ಹೆಗ್ಗರವಳ್ಳಿ ಗ್ರಾಮಸ್ಥರು ತಕ್ಷಣವೇ ಗೋಣೀಬೀಡು ಉಪವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಉಪವಲಯ ಅರಣ್ಯಾಧಿಕಾರಿ ಶಿವಕುಮಾರ್ ಇಲಾಖೆಯ ಸಿಬ್ಬಂದಿಗಳೊಂದಿಗೆ  ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಅಂದಾಜು 5 ಲಕ್ಷ ರೂ ಬೆಲೆಬಾಳುವ 54 ಕೆಜಿ ತೂಕದ ಗಂಧದಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Join Whatsapp
Exit mobile version