ಚಿಕ್ಕಮಗಳೂರು | ತೂಫಾನ್ ವಾಹನ ಪಲ್ಟಿ; ಇಬ್ಬರಿಗೆ ಗಾಯ

Prasthutha|

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ದರ್ಬಾರ್ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೂಫಾನ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರ ಕೈ ಮುರಿತಕ್ಕೊಳಗಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

- Advertisement -

ಧರ್ಮಸ್ಥಳದಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ತೂಫಾನ್ ನಲ್ಲಿ ಒಟ್ಟು 13 ಜನರು ಧರ್ಮಸ್ಥಳದಲ್ಲಿ ಪೂಜೆ ಮುಗಿಸಿ ವಾಪಸು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Join Whatsapp