ಮತದಾರರ ಚೀಟಿ ಅಕ್ರಮ| ‘ಚಿಲುಮೆ’ ಆಡಳಿತಾಧಿಕಾರಿ ಲೋಕೇಶ್ ಬಂಧನ

Prasthutha|

ಬೆಂಗಳೂರು: ನಾಪತ್ತೆಯಾಗಿದ್ದ ‘ಚಿಲುಮೆ’ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ. ಲೋಕೇಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಈ ಕುರಿತು ಮಾಹಿತಿ ನೀಡಿದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ಗೌಡ, ‘ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ‘ಚಿಲುಮೆ’ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಲೋಕೇಶ್‌ನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.

ಸಂಸ್ಥೆಯ ಸಂಸ್ಥಾಪಕ ರವಿಕುಮಾರ್, ಅವರ ಸಹೋದರ ಕೆಂಪೇಗೌಡ ಹಾಗೂ ಇತರರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

Join Whatsapp