ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್ ನಿಂದ ನಿಧನ

Prasthutha|

ನವದೆಹಲಿ: ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

- Advertisement -

ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ರಿಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಬಹುಗುಣ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಹಿರಿಯ ಪರಿಸರವಾದಿ ಬಹುಗುಣರ ನಿಧನವನ್ನು ರಿಷಿಕೇಶದ ಏಮ್ಸ್‌ ಆಸ್ಪತ್ರೆಯು ದೃಢಪಡಿಸಿದೆ.

- Advertisement -

ಬೃಹತ್‌ ಅಣೆಕಟ್ಟು, ಕೈಗಾರಿಕೆ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ಅರಣ್ಯ ನಾಶ ಆಗುತ್ತಿರುವುದನ್ನು ತಡೆಯಲೆಂದು 1973ರಲ್ಲಿ ಚಿಪ್ಕೊ ಚಳವಳಿ ಆರಂಭವಾಗಿತ್ತು. ಉತ್ತರ ಪ್ರದೇಶದಲ್ಲಿ ಈ ಚಳವಳಿಗೆ ಪರಿಸರವಾದಿ ಸುಂದರ್‌ ಲಾಲ್‌ ಬಹುಗುಣ ನಾಂದಿ ಹಾಡಿದ್ದರು. ಅವರ ನಿಧನಕ್ಕೆ ಅನೇಕ ಗಣ್ಯರು ಪರಿಸರ ಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Join Whatsapp