Home ಟಾಪ್ ಸುದ್ದಿಗಳು ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್ ನಿಂದ ನಿಧನ

ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್ ನಿಂದ ನಿಧನ

ನವದೆಹಲಿ: ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ರಿಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಬಹುಗುಣ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಹಿರಿಯ ಪರಿಸರವಾದಿ ಬಹುಗುಣರ ನಿಧನವನ್ನು ರಿಷಿಕೇಶದ ಏಮ್ಸ್‌ ಆಸ್ಪತ್ರೆಯು ದೃಢಪಡಿಸಿದೆ.

ಬೃಹತ್‌ ಅಣೆಕಟ್ಟು, ಕೈಗಾರಿಕೆ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ಅರಣ್ಯ ನಾಶ ಆಗುತ್ತಿರುವುದನ್ನು ತಡೆಯಲೆಂದು 1973ರಲ್ಲಿ ಚಿಪ್ಕೊ ಚಳವಳಿ ಆರಂಭವಾಗಿತ್ತು. ಉತ್ತರ ಪ್ರದೇಶದಲ್ಲಿ ಈ ಚಳವಳಿಗೆ ಪರಿಸರವಾದಿ ಸುಂದರ್‌ ಲಾಲ್‌ ಬಹುಗುಣ ನಾಂದಿ ಹಾಡಿದ್ದರು. ಅವರ ನಿಧನಕ್ಕೆ ಅನೇಕ ಗಣ್ಯರು ಪರಿಸರ ಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Join Whatsapp
Exit mobile version