Home ಟಾಪ್ ಸುದ್ದಿಗಳು ಚಿತ್ರದುರ್ಗ: ಫೋಟೋಗ್ರಾಫರ್ ಬರ್ಬರ ಹತ್ಯೆ

ಚಿತ್ರದುರ್ಗ: ಫೋಟೋಗ್ರಾಫರ್ ಬರ್ಬರ ಹತ್ಯೆ

ಚಿತ್ರದುರ್ಗ: ರಾತ್ರಿ ಊಟ ಮಾಡಿ ಮಲಗಿದ್ದ ಫೋಟೋಗ್ರಾಫರ್ ನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಬಸವರಾಜ್ ಎನ್ನಲಾಗಿದೆ.

ಬಸವರಾಜ್ ತನ್ನ ಸಹೋದರಿಯ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ಎದ್ದು ನೋಡುವಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಈ ಸಂಬಂಧ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೊಳಲ್ಕೆರೆ ವೃತ್ತ ನಿರೀಕ್ಷಕ ರವೀಶ್ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version