ಹೆಚ್ಚಾದ ತಾಪ ಮಾನದಿಂದ ರಾಜ್ಯದಲ್ಲಿ 6 ಮಂದಿಗೆ ಕಾಲರಾ: ಬಿಸಿಗಾಳಿಗೆ ಓರ್ವ ಬಲಿ: ಆರೋಗ್ಯ ಇಲಾಖೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೆ, ಬಿಸಿಗಾಳಿಯ ಪರಿಣಾಮದಿಂದ ಓರ್ವ ಸಾವನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

- Advertisement -

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ರಾಮನಗರ ಸೇರಿದಂತೆ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಬಿಸಿಲ ತಾಪ ಹೆಚ್ಚಾಗುತ್ತಿರೋದು, ಬಿಸಿಗಾಳಿಯ ಪರಿಣಾಮವೇ ಕಾಲರಾ ಹೆಚ್ಚಳಕ್ಕೆ ಕಾರಣ ಎಂಬುದಾಗಿ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಇಬ್ಬರಿಗೆ ಕಾಲರಾ ದೃಢಪಟ್ಟರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರಿಗೆ ಕಾಲರಾ ಸೋಂಕು ತಗುಲಿರೋದು ಪರೀಕ್ಷೆಯಲ್ಲಿ ತಿಳಿದು ಬಂದಿದೆ. ರಾಮನಗರದಲ್ಲಿ ಒಬ್ಬ ವ್ಯಕ್ತಿ ಸೇರಿದಂತೆ 6 ಮಂದಿಗೆ ಕಾಲರಾ ದೃಢಪಟ್ಟಿರೋದಾಗಿ ಅವರು ಹೇಳಿದರು.

ರಾಜ್ಯದಲ್ಲಿ ಕಾಲರಾ ತಡೆಗಾಗಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇಂದು ತಡರಾತ್ರಿ ರಾಜ್ಯದಲ್ಲಿ ಕಾಲರಾ ರೋಗ ತಡೆ ಸಂಬಂಧ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದರು.

ಬಿಸಿಗಾಳಿ ಹೆಚ್ಚಾಗುತ್ತಿರೋ ಕಾರಣ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ರಂದೀಪ್ ಹೇಳಿದರು.

Join Whatsapp