ಉಳ್ಳಾಲ: ಕ್ರೈಸ್ತ ಧರ್ಮ ಪ್ರಚಾರದ ಸಾಹಿತ್ಯ ಕೃತಿಗಳು ಪತ್ತೆ| ಸ್ಥಳದಲ್ಲಿ ಉದ್ವಿಗ್ನ!

Prasthutha|

ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಉಳ್ಳಾಲದ ಸೋಮೇಶ್ವರದಲ್ಲಿರುವ ರೈಲ್ವೇ ನಿಲ್ದಾಣದ ಹಿಂಭಾಗದಲ್ಲಿರುವ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟಿರುವ ಘಟನೆ ನಡೆದಿದೆ. ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

- Advertisement -

ಅಪರಿಚಿತ ವ್ಯಕ್ತಿಯೊಬ್ಬ ಇಂದು(ಶುಕ್ರವಾರ) ಬೆಳಿಗ್ಗೆ ಸುಮಾರು 15 ಮನೆಗಳ ಗೇಟುಗಳಲ್ಲಿ ಕನ್ನಡ ಹಾಗೂ ಮಲಯಾಳಂನಲ್ಲಿ ಬರೆದಿರುವ ಕ್ರೈಸ್ತ ಧರ್ಮ ವಿಚಾರಗಳ ಕುರಿತ ಭಿತ್ತಿಪತ್ರ ಮತ್ತು ಎರಡು ಪುಸ್ತಕಗಳನ್ನು ಇರಿಸಿದ್ದಾನೆ. ಈ ಸಂದರ್ಭ ವೃದ್ಧೆಯೊಬ್ಬರು ವ್ಯಕ್ತಿಯನ್ನು ಗಮನಿಸಿ, ಆತ ಸೇಲ್ಸ್ ಮ್ಯಾನ್ ಆಗಿರಬಹುದೆಂದು ತಮಗೇ ಏನೂ ಬೇಡ ಅಂದಿದ್ದಾರೆ. ಆದರೂ ಆತ ಅವರ ಗೇಟಿನಲ್ಲಿ ಪುಸ್ತಕ, ಭಿತ್ತಿಪತ್ರ, ಸ್ಟಿಕ್ಕರ್ ಇರಿಸಿ ಹೋಗಿದ್ದಾನೆ ಎನ್ನಲಾಗಿದೆ.

ಮತಾಂತರ ನಡೆಸುವ ಉದ್ದೇಶದಿಂದಲೇ ಕೃತ್ಯ ಎಸಗಲಾಗಿದೆ ಎನ್ನಲಾಗಿದ್ದು, ಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದೆ.

- Advertisement -

ಘಟನಾ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಭಿತ್ತಿ ಪತ್ರದಲ್ಲಿರುವ ಮೊಬೈಲ್ ನಂಬರ್ ಗೆ ಕರೆ ಮಾಡಿ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ‌.

Join Whatsapp