ಬಂಧಿತ ಎಡಿಜಿಪಿ ಅಮೃತ್ ಪೌಲ್ ಆಪ್ತರ ಮನೆಗಳ ಮೇಲೆ ಸಿಐಡಿ ದಾಳಿ

Prasthutha|

ಬೆಂಗಳೂರು:  ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಎಡಿಜಿಪಿ ಅಮೃತ್ ಪೌಲ್ ಆಪ್ತರ ಮನೆಗಳ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಜಕ್ಕೂರಿನ‌ ಶಂಭುಲಿಂಗ ಹಾಗೂ ಬೊಮ್ಮಸಂದ್ರದ ಹುಸ್ಕೂರ್ ನಿವಾಸಿ ಆನಂದ್ ಎಂಬುವವರ ಮನೆಗಳ ಮೇಲೆ ಸಿಐಡಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ‌.

ದಾಳಿ ವೇಳೆ ಲಕ್ಷಾಂತರ ರೂ ಮೌಲ್ಯದ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಕ್ಕೂರಿನ ಶಂಭುಲಿಂಗ ಅವರು ರಾಯಚೂರು ಮೂಲದ ಎಎಸ್​ಐ ಅವರ ಮಗನಾಗಿದ್ದು, ನಗರಕ್ಕೆ ಬಂದು 10 ವರ್ಷಗಳಾಗಿದೆ.

- Advertisement -

ಜಕ್ಕೂರಿನಲ್ಲಿ 6 ಕೋಟಿ ಮೌಲ್ಯದ ಫ್ಲ್ಯಾಟ್ ಹಾಗೂ 15 ಕೋಟಿಗೂ ಅಧಿಕ ಮೌಲ್ಯದ ಲ್ಯಾಂಡ್​​​​​ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ‌. ಕೊಡಿಗೆಹಳ್ಳಿಯಲ್ಲಿ ಕೃಷಿ ಉತ್ಪನ್ನಗಳ ಅಂಗಡಿ ಸಹ ಇಟ್ಟುಕೊಂಡಿದ್ದಾರೆ. ಎಡಿಜಿಪಿ ಅಮೃತ್ ಪಾಲ್ ಅವರ ಬೇನಾಮಿಯಾಗಿದ್ದ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಹುಸ್ಕೂರು ಆನಂದ್ ಕೂಡ ಅಮೃತ್ ಪಾಲ್ ಜೊತೆ ಸೇರಿ ಕೋಟಿ ಕೋಟಿ ಕೊಳ್ಳೆ ಹೊಡೆದಿದ್ದಾರೆ ಎನ್ನುವ ಆರೋಪವಿದೆ. ಹುಸ್ಕೂರು, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಅಧಿಕಾರಿಗಳು ದಾಳಿ‌ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

Join Whatsapp