ಅಕ್ರಮ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ: ಸಿಎಂಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹ

Prasthutha|

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.

- Advertisement -

ಪರ್ಸಂಟೇಜ್ ಹಗರಣ, ಪಿಎಸ್‌ ಐ ನೇಮಕಾತಿ ಅಕ್ರಮ, ಮತದಾರರ ಪಟ್ಟಿ ಗೋಲ್‌ಮಾಲ್ ಸಹಿತ ಹಲವಾರು ಅಕ್ರಮಗಳ ಬಗ್ಗೆ ಆರೋಪ ಮಾಡಿದ್ದೀರಿ. ಒಟ್ಟಾರೆ 1,50,000 ಕೋಟಿ ರೂಪಾಯಿ ಭ್ರಷ್ಟಾಚಾರ ಬಗ್ಗೆ ರೇಟ್ ಕಾರ್ಡ್ ಬಿಡುಗಡೆಯಾಗಿದೆ. ಈಗ ತಮ್ಮದೇ ಪಕ್ಷ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಉನ್ನತಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಲಾಗಿದೆ.



Join Whatsapp