ಮಹಾನಗರ ಪಾಲಿಕೆಗಳಿಗೆ ಶೀಘ್ರ ಚುನಾವಣೆ | ಸಚಿವ ಬೈರತಿ ಬಸವರಾಜ

Prasthutha|

ಬೆಂಗಳೂರು, ಜು.12 : ರಾಜ್ಯದಲ್ಲಿ ಅವಧಿ ಮುಗಿದಿರುವ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಬೇಕೆಂಬುದು ಸರ್ಕಾರದ ಅಭಿಲಾಷೆ ಆಗಿದ್ದು, ಕೊರೊನಾ ಸ್ಥಿತಿಗತಿ ನೋಡಿಕೊಂಡು ಸೂಕ್ತ ವೇಳೆಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಹಿನ್ನೆಲೆಯಲ್ಲಿ ಪಾಲಿಕೆಗಳ ಚುನಾವಣೆಗೆ ಹಿನ್ನಡೆಯಾಗಿತ್ತು. ಇದೀಗ ಕೊರೋನಾ ಸೋಂಕು ಕಡಿಮೆಯಾಗುತ್ತಿದ್ದು, ಸೂಕ್ತ ಸಮಯ ನೋಡಿಕೊಂಡು ಬೆಳಗಾವಿ, ವಿಜಯಪುರ, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಾರ್ಡ್ ಮೀಸಲಾತಿ ಪ್ರಕಟ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಇದೀಗ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.

Join Whatsapp