Home ಟಾಪ್ ಸುದ್ದಿಗಳು ಪ್ರವಾಸ ಕೈಗೊಂಡಿದ್ದ ದಂಪತಿ: ಮನೆಗೆ ಮರಳಿದ ಮರುದಿನವೇ ಪತ್ನಿಯನ್ನೇ ಕೊಂದ ಪತಿ

ಪ್ರವಾಸ ಕೈಗೊಂಡಿದ್ದ ದಂಪತಿ: ಮನೆಗೆ ಮರಳಿದ ಮರುದಿನವೇ ಪತ್ನಿಯನ್ನೇ ಕೊಂದ ಪತಿ

ಚಿಕ್ಕಮಗಳೂರು: ಒಂದು ವಾರದವರೆಗೆ ದಂಪತಿ ಗೋವಾ ಪ್ರವಾಸ ಕೈಗೊಂಡು ಮನೆಗೆ ಬಂದ ಮರು ದಿನವೇ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.

ಮೃತಳನ್ನು 34 ವರ್ಷದ ಶಮಾಭಾನು ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಗೈದ ಪತಿ ಶಬ್ಬೀರ್ ಅಹಮದ್, ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜೊತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನ ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version