Home ಟಾಪ್ ಸುದ್ದಿಗಳು ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ, ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತಾವಣ

ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ, ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತಾವಣ

ರಾಮನಗರ: ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟದ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪರಿಣಾಮ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ್ದಾರೆ.


ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಬಂದಿದ್ದ ಮಾಜಿ ಶಾಸಕ ಬಾಲಕೃಷ್ಣ ಅವರಿಗೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಮತ್ತೊಂದೆಡೆ ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಇದೇ ವಿಚಾರಕ್ಕೆ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಯಿತು. ಬಾಲಕೃಷ್ಣ ಕಾರ್ಯಕ್ರಮ ಮುಗಿಸಿ ಹೋಗುವ ವೇಳೆ ಕಾರಿನ ಮೇಲೆ ಕೆಲವರು ಕಲ್ಲು ತೂರಿದ್ದಾರೆ.


ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

Join Whatsapp
Exit mobile version