ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಐವರಿಗೆ ಚೂರಿ ಇರಿತ

Prasthutha|

ಶಿವಮೊಗ್ಗ: ಹಳೇ ವೈಷಮ್ಯದ ಗುಂಪು ಗಲಾಟೆಯಲ್ಲಿ ಐವರಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ದ್ರೌಪದಮ್ಮ ಸರ್ಕಲ್​ನಲ್ಲಿ ಸೆಪ್ಟೆಂಬರ್ 21ರ ತಡರಾತ್ರಿ ನಡೆದಿದೆ.

- Advertisement -

ಪವನ್ ಹಾಗೂ ಕಿರಣ್ ಎನ್ನುವರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಐವರಿಗೆ ಚಾಕು ಇರಿಯಲಾಗಿದೆ.

ನಗರದಲ್ಲಿ ತಡರಾತ್ರಿ ಗುಂಪು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಐವರಿಗೆ ಚಾಕುವಿನಿಂದ ಇರಿಯಲಾಗಿದೆ.

- Advertisement -

ಹಲ್ಲೆಗೊಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



Join Whatsapp