ಬೆಂಗಳೂರಿನಲ್ಲಿ ಬೀದಿ ಬದಿ ಅಂಗಡಿಗಳ ತೆರವು: ಹೃದಯಾಘಾತದಿಂದ ವ್ಯಾಪಾರಿ ಸಾವು

Prasthutha|

ಬೆಂಳೂರು: ಬಿಬಿಎಂಪಿ ಕೆಲವು ಪ್ರದೇಶಗಳಲ್ಲಿ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆ ಜಯನಗರದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಜಯನಗರದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ ವ್ಯಾಪಾರ ಮಾಡುತ್ತಿದ್ದ ಕೃಷ್ಣ(49) ಮೃತ ವ್ಯಕ್ತಿ. ಮುಂದಕ್ಕೆ ವ್ಯಾಪಾರಕ್ಕೆ ಅವಕಾಶ ಇಲ್ಲದ ಕಾರಣ ಮನನೊಂದು ಹೃದಯಾಘಾತವಾಗಿದೆ.

ನವೆಂಬರ್​​​​​ 07 ರಂದು ಬಿಬಿಎಂಪಿ ಮಾರ್ಷಲ್‌ಗಳ ತಂಡ ಜೆಸಿಬಿ‌ ಮೂಲಕ ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಇರುವ ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ತೆರವುಗೊಳಿಸಿತ್ತು.ಇದರಿಂದಾಗಿ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿಯಲ್ಲಿದ್ದು, ಅಂಗಡಿಗಳ ತೆರವು ಕಾರ್ಯಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ತೆರವು ಕಾರ್ಯಾಚಾರಣೆ ಸಂಬಂಧವಾಗಿ ಮಾತನಾಡಿದ ಉಸ್ತುವಾರಿ ಅಧಿಕಾರಿ ಸೋಮಶೇಖರ್​, ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರೆ. ತೆರವು ಮಾಡಬೇಕು ಎಂದು 6 ತಿಂಗಳ ಹಿಂದೆ ಹೇಳಲಾಗಿತ್ತು. ಬಳಿಕ ಸುಮಾರು ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು. ಅಷ್ಟೇ ಅಲ್ಲ, ನವೆಂಬರ್ 4 ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿದ್ದೆವು. ಅದರಂತೆ ತೆರವುಗೊಳಿಸಲಾಗಿದೆ ಎಂದಿದ್ದಾರೆ.

Join Whatsapp