ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಮತ್ತು ಆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮತಾಡಿದ ಬೊಮ್ಮಾಯಿ, ನಾನು ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ ಎಂದು ಹೇಳಿದರು.

ಜೊತೆಗೆ ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರ ಮನಸ್ಸಿಗೆ ಘಾಸಿ ಮಾಡುವಂತಹ ಪ್ರಚೋದನಕಾರಿ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟುನಿಟ್ಟಾಗಿ ಆದೇಶಗಳನ್ನು ನೀಡಿ. ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Join Whatsapp