ಕುರ್ಚಿ ಉಳಿಸಿಕೊಳ್ಳಲು ಸಿಎಂ ಬೊಮ್ಮಾಯಿ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ ಟೀಕೆ

Prasthutha|

ಹಸಿವಿನ ಸೂಚ್ಯಂಕದಲ್ಲಿ ದೇಶ ಕುಸಿದಿರುವುದು ನರೇಂದ್ರ ಮೋದಿಯ ಅಚ್ಚೇ ದಿನ್ ಕೊಡುಗೆ

- Advertisement -

ಹುಬ್ಬಳ್ಳಿ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿ ಆರ್ ಎಸ್ಎಸ್ ಹೊಗಳುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.


ಬೊಮ್ಮಾಯಿಯವರು ಆರ್ ಎಸ್ ಎಸ್ ನವರು ಅಲ್ಲ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಆರ್ ಎಸ್ಎಸ್ ನಲ್ಲಿ ಇದ್ದರಾ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -


ಭಾರತ ಹಸಿವಿನ ಸೂಚ್ಯಂಕದಲ್ಲಿ 94 ರಿಂದ 101ನೇ ಸ್ಥಾನಕ್ಕೆ ಜಿಗಿದಿದೆ. ದೇಶದಲ್ಲಿ ನಿರುದ್ಯೋಗ, ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆ ಎಂದು ವ್ಯಂಗ್ಯವಾಡಿದರು.
ಅನ್ನ ಭಾಗ್ಯದಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಹೊಟ್ಟೆ ತುಂಬಿದವರು ಆಡುವ ಮಾತು. ಉಚಿತ ಅಕ್ಕಿ ಬಗ್ಗೆ ಬಡವರನ್ನು ಕೇಳಿ. ಹೊಟ್ಟೆ ತುಂಬಿದವರನ್ನಲ್ಲ. ಎಚ್.ಡಿ. ಕುಮಾರಸ್ವಾಮಿ ಮಾತಿಗೆ ಕಿಮ್ಮತ್ತು ಕೊಡಲ್ಲ. ಅವರ ಮಾತು ವೇದವಾಕ್ಯವಲ್ಲ ಎಂದು ಹೇಳಿದ್ದಾರೆ.

Join Whatsapp