ವೇಗವಾಗಿ ಹಾದು ಹೋದ ರೈಲು: ಕೂದಲೆಳೆ ಅಂತರದಲ್ಲಿ ಪಾರಾದ ಸಿಎಂ ಚಂದ್ರಬಾಬು ನಾಯ್ಡು

Prasthutha|

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತಂಡ ಜಲಾವೃತಗೊಂಡಿದ್ದ ಹೊಳೆಯನ್ನು ವೀಕ್ಷಿಸುತ್ತಿದ್ದಾಗ ಅವರ ಸಮೀಪದಲ್ಲೇ ವೇಗವಾಗಿ ರೈಲು ಹಾದು ಹೋಗಿದೆ. ಕೂದಲೆಳೆ ಅಂತರದಿಂದ ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ.

- Advertisement -


ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ ಘಟನೆ ಸಂಭವಿಸಿದೆ.


ಇದ್ದಕ್ಕಿದ್ದಂತೆ, ಒಂದು ರೈಲು ವಿರುದ್ಧ ದಿಕ್ಕಿನಿಂದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಸಮೀಪಿಸಿತು. ಆಗ ಅವರ ಜೊತೆಗಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ರೈಲು ಮಾರ್ಗದಿಂದ ತ್ವರಿತವಾಗಿ ಹಿಂದೆ ಸರಿದಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ. ರೈಲು ಹಾದುಹೋದ ನಂತರ, ಆ ತಂಡವು ತಮ್ಮ ತಪಾಸಣೆಯನ್ನು ಮುಂದುವರೆಸಿತು. ಸಿಎಂ ಚಂದ್ರಬಾಬು ನಾಯ್ಡು ಅವರು ಕಳೆದ ಕೆಲವು ದಿನಗಳಿಂದ ವಿಜಯವಾಡದಲ್ಲಿಯೇ ಉಳಿದುಕೊಂಡಿದ್ದು, ನಗರ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮತ್ತು ಪರಿಹಾರ ಪ್ರಯತ್ನಗಳು ಮುಂದುವರಿದಿವೆ.

- Advertisement -

https://x.com/jsuryareddy/status/1831686533511819561?ref_src=twsrc%5Etfw%7Ctwcamp%5Etweetembed%7Ctwterm%5E1831686533511819561%7Ctwgr%5E7d2968b029be9358b170dc7ab9052f93bee31e47%7Ctwcon%5Es1_c10&ref_url=https%3A%2F%2Fwww.prajavani.net%2Fnews%2Findia-news%2Fchandrababunaidu-narrowly-escaped-when-a-speeding-train-passed-justafewfeet-2956932



Join Whatsapp
Exit mobile version