Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣ: ಸತ್ಯಮೂರ್ತಿ ಬಂಧನ

ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣ: ಸತ್ಯಮೂರ್ತಿ ಬಂಧನ

ಮೈಸೂರು: ಮಂಗಳವಾರ ಮುಂಜಾನೆ ಮೈಸೂರಿನ ಟಿಕೆ ಲೇಔಟ್‌ ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸತ್ಯಮೂರ್ತಿ ಬಂಧಿತ ಆರೋಪಿ.

ಸತ್ಯಮೂರ್ತಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಕಲ್ಲು ಎಸೆದು ಪರಾರಿಯಾಗಿದ್ದನು. ಪ್ರಕರಣ ಸಂಬಂಧ ಆರೋಪಿ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​​ 427 353 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

Join Whatsapp
Exit mobile version