ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ

Prasthutha|

ಬೆಂಗಳೂರು: ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

- Advertisement -

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಇಬ್ರಾಹಿಂ ಅವರನ್ನು ಉಚ್ಚಾಟನೆಗೊಳಿಸಲಾಗಿದೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆಯಾದಾಗಿನಿಂದಲೂ ಇಬ್ರಾಹಿಂ ಅವರು ಪಕ್ಷದ ವಿರುದ್ಧ, ಪಕ್ಷದ ನಾಯಕರಾದ ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.

ಕೇರಳ ಸೇರಿದಂತೆ ವಿವಿಧ ಸಂಘಟನೆಗಳ ಜೊತೆ ಪಕ್ಷಕ್ಕೆ ವಿರುದ್ಧವಾಗಿ ಸಭೆ ಮಾಡಿದ್ದಾರೆ. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ನಮ್ಮದೇ ಒರಿಜಿನಲ್ ಜೆಡಿಎಸ್ ಅಂತ ಪದೇ ಪದೇ ಹೇಳಿಕೊಂಡು ಬಂದಿದ್ದಾರೆ. ಈ ಎಲ್ಲ ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಒಮ್ಮತದ ತೀರ್ಮಾನದೊಂದಿಗೆ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಲಾಗಿದೆ.



Join Whatsapp