Home ಟಾಪ್ ಸುದ್ದಿಗಳು ಬಿಜೆಪಿ ಜತೆ ಮೈತ್ರಿ: ಸಿಎಂ ಇಬ್ರಾಹಿಂ ಅಸಮಾಧಾನ ಶಮನಕ್ಕೆ ಯತ್ನಿಸಿದ ದೇವೇಗೌಡ

ಬಿಜೆಪಿ ಜತೆ ಮೈತ್ರಿ: ಸಿಎಂ ಇಬ್ರಾಹಿಂ ಅಸಮಾಧಾನ ಶಮನಕ್ಕೆ ಯತ್ನಿಸಿದ ದೇವೇಗೌಡ

ಬೆಂಗಳೂರು: ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಆಯಾ ಪಕ್ಷದ ಕೆಲ ನಾಯಕರು ಈ ವಿರೋಧ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಬಿಜೆಪಿಯೊಂದಿಗೆ ದೋಸ್ತಿ ಬೆಳೆಸಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದ ನಾಯಕರು ದೇವೇಗೌಡ-ಕುಮಾರಸ್ವಾಮಿ ನಡೆಗೆ ಸಿಡಿದೆದ್ದಿದ್ದು, ಒಬ್ಬೊಬ್ಬರೇ ಪಕ್ಷ ತೊರೆಯುತ್ತಿದ್ದಾರೆ.

ಇನ್ನು ಮುಖ್ಯವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸಹ ಅಸಮಾಧಾನಗೊಂಡಿದ್ದು, ಇದೀಗ ಖುದ್ದು ದೇವೇಗೌಡ ಅವರು ಅಖಾಡಕ್ಕಿಳಿದು ಇಬ್ರಾಹಿಂ ಮುಸಿಸು ಶಮನಕ್ಕೆ ಮುಂದಾಗಿದ್ದಾರೆ.

ಇಂದು(ಅ,01) ಇಬ್ರಾಹಿಂಗೆ ದೂರವಾಣಿ ಕರೆ ಮಾಡಿದ ದೇವೇಗೌಡ್ರು, ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ತೋಟದ ಮನೆಯಲ್ಲಿ ನಡೆಯುವ ಸಭೆಗೆ ಬರುವಂತೆ ಆಹ್ವಾನ ಆಹ್ವಾನ ನೀಡಿದ್ದಾರೆ. ಆದ್ರೆ, ಇಬ್ರಾಹಿಂ ಅಸಮಾಧಾನಿತರ ಸಭೆಗೆ ಬರಲು ನಿರಾಕರಿಸಿದ್ದು, ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಾತಾಡುತ್ತೇನೆ ಎಂದಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಇಬ್ರಾಹಿಂ ಜೆಡಿಎಸ್​ ತೊರೆಯುವ ಸಾಧ್ಯತೆಗಳು ಹೆಚ್ಚಿವೆ.

Join Whatsapp
Exit mobile version