ಪಕ್ಷಕ್ಕಿಂತ ರಾಜ್ಯದ ಪ್ರಧಾನಿಯಾಗಿದ್ದ ದೇವೇಗೌಡರೇ ನನಗೆ ಮುಖ್ಯ: ಸಿಎಂ ಇಬ್ರಾಹೀಂ

Prasthutha|

► 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ !

- Advertisement -

ಕೋಲಾರ: ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿರುವ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್‌ಗೆ 2 ಸ್ಥಾನ ಸಿಕ್ಕಿದೆ ಎಂದಿದ್ದಾರೆ. ಅಲ್ಲದೇ ನನಗೆ ಪಕ್ಷಕ್ಕಿಂತ ಕರ್ನಾಟಕ ರಾಜ್ಯದ ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ ಎಂದು ಹೇಳಿ ಪರೋಕ್ಷವಾಗಿ ಜೆಡಿಎಸ್ ಸೇರುವ ಸುಳಿವು ನೀಡಿದ್ದಾರೆ.

ನಮ್ಮ ತಂದೆ ತಾಯಿ ಅಜ್ಜ ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರು, ನಾವು ಎಂದಿಗೂ ಮೂಲ ಕಾಂಗ್ರೆಸಿಗರು ಎಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸಿಗರು ಎಂದು ಯಾರು ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೆ ಸ್ಥಾನ ಕಾಯ್ದುಕೊಳ್ಳಲಿದೆ ಎಂದು ಭವಿಷ್ಯವನ್ನೂ ಕೂಡ ಸಿಎಂ ಇಬ್ರಾಹೀಂ ನುಡಿದಿದ್ದಾರೆ.

- Advertisement -

ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಈಗಾಗಲೇ ಸಂಗ್ರಹಿಸಿದ್ದು, ನಾಳೆ ಅಧಿಕೃತವಾಗಿ ಯಾವ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ ಎಂದು ಘೋಷಣೆ ಮಾಡುವೆ ಎಂದಿದ್ದಾರೆ.

Join Whatsapp