ಸರ್ಕಾರಿ ಗೌರವದೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ಸಿಎಂ ಎಂ.ಕೆ ಸ್ಟಾಲಿನ್ ಘೋಷಣೆ

Prasthutha|

ಚೆನ್ನೈ: ಅಂಗಾಂಗ ದಾನ ಮಾಡುವ ದಾನಿಗಳ ಗೌರವಾರ್ಥವಾಗಿ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸುವುದಾಗಿ ಸಿಎಂ ಎಂ.ಕೆ ಸ್ಟಾಲಿನ್ ಘೋಷಣೆ ಮಾಡಿದ್ದಾರೆ.

- Advertisement -

ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸಿದವರ ತ್ಯಾಗವನ್ನು ಗೌರವಿಸಲು ಆ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಇನ್ನುಮುಂದೆ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಜೀವ ನೀಡುವಲ್ಲಿ ತಮಿಳುನಾಡು ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ. ಅಂಗಾಂಗ ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ. ಮೆದುಳು ಡೆಡ್ ಆದ ಕುಟುಂಬದ ಸದಸ್ಯರ ದುರಂತ ಪರಿಸ್ಥಿತಿಯ ನಡುವೆಯೂ ಅವರು ನೀಡುವ ಅಂಗಗಳಿಂದ ಬೇರೆಯವರು ಮರುಜೀವ ಪಡೆಯುತ್ತಿದ್ದಾರೆ. ಹೀಗಾಗಿ, ಆ ದಾನಿಗಳನ್ನು ಗೌರವಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

Join Whatsapp