ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ: ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ

Prasthutha|

ಬೆಂಗಳೂರು: ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

- Advertisement -


ಸಂಸತ್ ನಲ್ಲಿ ಕೇಂದ್ರದಿಂದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.


ಬಿಜೆಪಿಯವರು, ಎನ್ ಡಿಎ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು. ಎನ್ ಡಿಎ ಸರ್ಕಾರ ಜಾತ್ಯಾತೀತ ಸರ್ಕಾರ ಅಲ್ಲ. ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ. ಎನ್ ಡಿಎ ಕೂಟ ಕಮ್ಯುನಲ್ ಪಾರ್ಟಿಗಳು, ಫ್ಯಾಸಿಸ್ಟ್ ಮನಸ್ಥಿತಿ ಇರೋರು ಎಂದು ವಾಗ್ದಾಳಿ ನಡೆಸಿದರು. ಶುಕ್ರವಾರ (ಆ.9) ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ನಡೆಯಲಿದೆ. ಅಲ್ಲಿ ಎಲ್ಲ ಮಾತಾಡ್ತೀನಿ ಎಂದರು.



Join Whatsapp