ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Prasthutha|

ಹಾಸನ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

- Advertisement -

ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ ನಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಚಾಲನೆ ನೀಡಿದರು.

ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದ ಸಿಎಂ ಯೋಜನೆಯನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಟೇಪ್ ಕತ್ತರಿಸುವ ಮೂಲಕ ಪಂಪ್ ಹೌಸ್ ಉದ್ಘಾಟಿಸಿದರು.

- Advertisement -

ಸಮಾರಂಭದಲ್ಲಿ ಸಿಎಂ, ಡಿಸಿಎಂಗೆ ಸಚಿವರಾದ ರಾಜಣ್ಣ, ಎಂಬಿ ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಶಿವಲಿಂಗೇಗೌಡ, ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಗುಬ್ಬಿ ಶ್ರೀನಿವಾಸ್ ಸೇರಿ ಹಲವರು ಸಾಥ್ ನೀಡಿದರು. ಎತ್ತಿನಹೊಳೆ ಯೋಜನೆಯ ಮೂರನೇ ನೀರೆತ್ತುವ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಲಾಯಿತು.



Join Whatsapp
Exit mobile version